Sunday, May 12, 2024
Homeತಾಜಾ ಸುದ್ದಿಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ ವಿಹೆಚ್‌ಪಿ ಪ್ರತಿಭಟನೆ ಸುದ್ದಿ: ಈ ಬಗ್ಗೆ ನಗರ ಪೊಲೀಸ್‌ ಆಯುಕ್ತರು...

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ ವಿಹೆಚ್‌ಪಿ ಪ್ರತಿಭಟನೆ ಸುದ್ದಿ: ಈ ಬಗ್ಗೆ ನಗರ ಪೊಲೀಸ್‌ ಆಯುಕ್ತರು ಹೇಳಿದ್ದೇನು?

spot_img
- Advertisement -
- Advertisement -

ಮಂಗಳೂರು: ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶದಾದ್ಯಂತ ಹಿಂಸೆ ನಡೆಸಿರುವುದನ್ನು ಖಂಡಿಸಿ ಜೂ.16 ರಂದು ಸಂಜೆ 3.00 ಗಂಟೆಗೆ ಪಿವಿಎಸ್ ವೃತ್ತದ ಬಳಿ ವಿಶ್ವ ಹಿಂದೂ ಪರಿಷತ್ – ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಾಪ್ ಗ್ರೂಪ್‌ಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪಿವಿಎಸ್ ವೃತ್ತದ ಬಳಿ ವಿಶ್ವಹಿಂದೂಪರಿಷತ್ – ಭಜರಂಗದಳ ಮಂಗಳೂರು ಇವರ ವತಿಯಿಂದ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಆದರೆ ಈ ಕುರಿತು ಅಧಿಕೃತವಾಗಿ ಅನುಮತಿ ಕೋರಿಕೆ ಪತ್ರವನ್ನು ಸಲ್ಲಿಸಿರುವುದು ಕಂಡು ಬರುವುದಿಲ್ಲ. ಆದಾಗ್ಯೂ ಸಹ ಹಾಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ಪ್ರತಿಭಟನೆಯನ್ನು ಮಾಡಲು ಅನುಮತಿ ನೀಡಿರುವುದಿಲ್ಲವಾಗಿ ಮಾಹಿತಿಯನ್ನು ತಿಳಿಯಪಡಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!