- Advertisement -
- Advertisement -
ಸುಳ್ಯ: ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಬರ್ಬರ ಹತ್ಯೆಯಾಗಿದ್ದು, ಸುಳ್ಯದ ಹಲವೆಡೆ ಪರಿಸ್ಥಿತಿ ತುಂಬಾನೆ ಸೂಕ್ಷ್ಮವಾಗಿದೆ. ಈ ಸಂದರ್ಭದಲ್ಲೇ ಅನ್ಯಮತೀಯ ವ್ಯಕ್ತಿಯೊಬ್ಬ ಎಡವಟ್ಟು ಮಾಡಿಕೊಂಡ ಘಟನೆಯೂ ನಡೆದಿದೆ.
ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ನಿಂತಿಕಲ್ಲು ಬಳಿ ತಲುಪಿದಾಗ ಅಲ್ಲಿ ಅನ್ಯಮತೀಯ ವ್ಯಕ್ತಿ ಮೊಬೈಲ್ ನಲ್ಲಿ ಮೆರವಣಿಗೆ ವೀಡಿಯೋ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕಾರ್ಯಕರ್ತರು ಪ್ರಶ್ನೆ ಮಾಡಲು ಮುಂದಾದಾಗ ಆತ ತನ್ನ ಬೈಕ್ ಅನ್ನು ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ವೇಳೆ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಆತನ ಬೈಕ್ ಪುಡಿಯಾಗಿದೆ ಎಂದು ತಿಳಿದು ಬಂದಿದೆ.
- Advertisement -