- Advertisement -
- Advertisement -
ಬೆಂಗಳೂರು:ತಮ್ಮ ಅಭಿಮಾನಿಯನ್ನೇ ಕೊಲೆ ಮಾಡಿದ ಪ್ರಕರಣದಲ್ಲಿ ನಟ ಡಿ ಬಾಸ್ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಪತಿ ಕೆಲಸದಿಂದ ಪತ್ನಿ ವಿಜಯಲಕ್ಷ್ಮೀ ಆಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
![](https://mahaxpress.com/wp-content/uploads/2024/06/WhatsApp-Image-2024-06-12-at-09.46.49_2affb798-507x1024.jpg)
ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ಪತ್ನಿ ವಿಜಯಲಕ್ಷ್ಮಿ ಅನ್ಫಾಲೋ ಮಾಡಿದ್ದಾರೆ.ಈ ಮೊದಲು ಅವರು ದರ್ಶನ್ನ ಫಾಲೋ ಮಾಡುತ್ತಿದ್ದ ವಿಜಯಲಕ್ಷ್ಮಿ ಬೇಸರದಿಂದ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಜೊತೆಗೆ ಇನ್ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ.
ವಿಜಯಲಕ್ಷ್ಮಿ ಮತ್ತು ಪವಿತ್ರಾಗೌಡರವರ ಮಧ್ಯೆ ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ನಡೆದಿತ್ತು.ಈ ಹಿಂದೆ ಪವಿತ್ರಾ ಗೌಡ ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ’10 ವರ್ಷಗಳ ಸಂಬಂಧ’ ಎಂದು ಟ್ಯಾಗ್ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಅವರಿಗೆ ಸೋಷಿಯಲ್ ಮೀಡಿಯಾ ಮೂಲಕವೇ ವಾರ್ನ್ ಮಾಡಿದ್ದರು.
- Advertisement -