ಉಡುಪಿ: ಲಂಚ ಸ್ವೀಕರಿಸುವಾಗ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಪೆರ್ಣಂಕಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಸಿಕ್ಕಿ ಬಿದ್ದ ಲೆಕ್ಕಾಧಿಕಾರಿ.
ನಿವಾಸಿಯೊಬ್ಬರು ಪೆರ್ಣಂಕಿಲ ಗ್ರಾಮದ ಸರ್ವೆ ನಂ 171/1 ರಲ್ಲಿ 1.15 ಎಕ್ರೆ ಸ್ಥಳ ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಸಂಬಂಧಪಟ್ಟಂತೆ ಪೆರ್ಣಂಕಿಲ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ದೂರುದಾರರಿಗೆ ಜಮೀನು ಸಕ್ರಮ ಮಾಡಿಕೊಡುವುದಕ್ಕಾಗಿ 10 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಅದರಂತೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹರೀಶ್ ದೂರುದಾರರಿಂದ ಲಂಚ ಸ್ವೀಕರಿಸುವಾಗ ಸ್ಥಳದಲ್ಲಿಯೇ ರೆಡ್ ಹ್ಯಾಂಡ್ ಸೆರೆಹಿಡಿಯಲಾಗಿದೆ. ಆರೋಪಿಯನ್ನು ಬಂಧಿಸಿ, ಲಂಚದ ಹಣವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.