- Advertisement -
- Advertisement -
ಮಹೇಂದ್ರ ಸಿಂಗ್ ಧೋನಿಯವರು ಅವರು ಎರಡೂ ಕಾಲುಗಳ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಇದೀಗ ಅವರು ರಾಂಚಿಯ ಸ್ಥಳೀಯ ಹಳ್ಳಿ ವೈದ್ಯರ ಬಳಿ ಕಾಡಿನಲ್ಲಿಸಿಗುವ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧ ಸೇವಿಸುತ್ತಿದ್ದಾರೆ.
ಧೋನಿ ಲ್ಯಾಂಪಂಗ್ನ ಸ್ಥಳೀಯ ವೈದ್ಯವಂದನ್ ಸಿಂಗ್ ಖೇರ್ವಾರ್ ಅವರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.ಮಾಹಿ ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಿದೆ ಎಂದು ವೈದ್ಯರು ಹೇಳಿದ್ದಾರೆ. ಒಬ್ಬಸ್ಥಳೀಯ ವೈದ್ಯರಿಂದ ತಮ್ಮ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುವ ಮೂಲಕ ಸುದ್ದಿಯಾಗಿದ್ದಾರೆ.
ಎಂಎಸ್ ಧೋನಿ ಅವರೇ ಔಷಧಿ ಗಾಗಿ ರಾಂಚಿಯಿಂದ 70 ಕಿಲೋಮೀಟರ್ ಕಾರಿನಲ್ಲಿ ಪ್ರಯಾಣ ಮಾಡಿ ಬರುತ್ತಾರೆ. ಅಲ್ಲದೆ ಅಲ್ಲಿ ಸಾಮಾನ್ಯನಂತೆ ಧೋನಿ ಮರದ ಕೆಳಗೆ ಕುಳಿತು ಔಷಧ ಸೇವಿಸುತ್ತಾರೆ. ಇವರಿಗೆ ಮಂಡಿ ನೋವು ಕೂಡಾ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.
- Advertisement -