Saturday, April 27, 2024
Homeತಾಜಾ ಸುದ್ದಿಗ್ರಾಮಪಂಚಾಯಿತಿ ಚುನಾವಣೆ ದಿನವೇ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಶರಣಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ

ಗ್ರಾಮಪಂಚಾಯಿತಿ ಚುನಾವಣೆ ದಿನವೇ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಶರಣಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ

spot_img
- Advertisement -
- Advertisement -

ಧಾರವಾಡ: ಗ್ರಾಮಪಂಚಾಯಿತಿ ಚುನಾವಣೆ ದಿನವೇ ಅಭ್ಯರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.

ದಾಮೋದರ್ ಯಲಿಗಾರ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದು, ದಾಮೋದರ್ ಯಲಿಗಾರ್ ಗರಗ ಗ್ರಾಮದ 2 ನೇ ವಾರ್ಡಿನ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಸೋಲಿನ ಭಯದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬಿಜೆಪಿ ಕಾರ್ಯಕರ್ತರಾಗಿದ್ದ ದಾಮೋದ ಅವರ ಅ-ವರ್ಗದಡಿ ಸ್ಪರ್ಧಿಸಿದ್ದರು. ಪ್ರಕರಣ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಯಲಿಗಾರ ಅವರ ಮನೆ ಮುಂದೆ ಸೇರಿದರು. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ..

- Advertisement -
spot_img

Latest News

error: Content is protected !!