- Advertisement -
- Advertisement -
ಸುಳ್ಯ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಸತತ ಭೂ ಕಂಪನ ಹಿನ್ನೆಲೆಯಲ್ಲಿ
ಗ್ರಾಮಸ್ಥರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸುಳ್ಯ ತಾಲೂಕಿನ ತೊಡಿಕಾನದ ಮಲ್ಲಿಕಾರ್ಜುನ ದೇವಾಲಯದಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸದಂತೆ ಪೂಜೆ ಸಲ್ಲಿಸಲಾಗಿದೆ.
ಭೂಕಂಪನ, ಭೂ ಕುಸಿತ, ಪ್ರವಾಹದಂತಹ ವಿಕೋಪ ಸಂಭವಿಸದಂತೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಸುಳ್ಯ ಮತ್ತು ಮಡಿಕೇರಿ ತಾಲೂಕಿನಲ್ಲಿ ವ್ಯಾಪಕ ಮಳೆ ಬೀಳುತ್ತಿದ್ದು, ಸಂಪಾಜೆ, ಚೆಂಬು, ಪೆರಾಜೆ ಗ್ರಾಮಗಳಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದೆ.
- Advertisement -