- Advertisement -
- Advertisement -
ಕಾಂತಾರ ಸಿನಿಮಾವನ್ನು ಗಣ್ಯಾತಿಗಣ್ಯರು, ಸೆಲೆಬ್ರಿಟಿಗಳೆಲ್ಲಾ ವೀಕ್ಷಿಸಿ ಪ್ರಶಂಸೆಯ ಸುರಿಮಳೆಯನ್ನೇ ಹರಿಸುತ್ತಿದ್ದಾರೆ. ಈಗ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ ಅವರು ಕೂಡ ‘ಕಾಂತಾರ’ ನೋಡುತ್ತಾರೆ ಎಂಬ ಮಾಹಿತಿ ಸಿಕ್ಕಿದೆ. ಇಂದು (ಅ.21) ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ಕುಟುಂಬ ಸಮೇತರಾಗಿ ಸಿನಿಮಾ ವೀಕ್ಷಿಸಲಿದ್ದಾರೆ. ಚಿತ್ರ ನೋಡಿದ ಬಳಿಕ ಅವರು ಯಾವ ರೀತಿಯ ಅಭಿಪ್ರಾಯ ತಿಳಿಸಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಹೆಚ್ಚಿದೆ.
ನಟ ಚೇತನ್ ಭೂತಕೋಲವು ಹಿಂದೂ ಧರ್ಮಕ್ಕೆ ಸೇರಿದ್ದಲ್ಲ ಎಂದು ಹೇಳಿ ಹೊಸ ಚರ್ಚೆಯನ್ನ ಹುಟ್ಟುಹಾಕಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆ ಕೂಡಾ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ ಅವರ ಅಭಿಪ್ರಾಯವೂ ಮುಖ್ಯವಾಗಲಿದೆ. ಅವರು ಸಿನಿಮಾ ನೋಡಿದ ಬಳಿಕ ಏನು ಹೇಳಲಿದ್ದಾರೆ ಎಂಬುದರ ಮೇಲೆ ಈ ಚರ್ಚೆಗೆ ಹೊಸ ಆಯಾಮ ಸಿಗುವ ಸಾಧ್ಯತೆ ಇದೆ.
- Advertisement -