- Advertisement -
- Advertisement -
ಉಡುಪಿ: ಇಂದು ಉಡುಪಿಯ ಜಿಲ್ಲಾಸ್ಪತ್ರೆಗೆ ಜಿಲ್ಲಾ ನ್ಯಾಯಾಧೀಶರು ದಿಢೀರ್ ಭೇಟಿ ಕೊಟ್ಟು ಆಸ್ಪತ್ರೆಯ ಕುಂದುಕೊರತೆಗಳನ್ನು ಪರಿಶೀಲಿಸಿದ್ದಾರೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಈ ಭೇಟಿ ನಡೆದಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ.ಶಾಂತವೀರ ಶಿವಪ್ಪ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಆಸ್ಪತ್ರೆ ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ರು. ನಂತರ ವಾರ್ಡ್ ಗಳಿಗೆ ಹಾಗೂ ಆಸ್ಪತ್ರೆಯ ಲ್ಯಾಬ್ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವರು ಇದೇ ರೀತಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟು ಅಲ್ಲಿನ ಕುಂದುಕೊರತೆ ಮತ್ತು ಸಮಸ್ಯೆಗಳನ್ನು ಪಟ್ಟಿಮಾಡಿ ವರದಿ ನೀಡಲಿದ್ದೇವೆ ಎಂದು ಹೇಳಿದ್ರು.
- Advertisement -