- Advertisement -
- Advertisement -
ವಿಟ್ಲ; ಕೊಳೆತ ಸ್ಥಿತಿಯಲ್ಲಿ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ಜಾಗದಲ್ಲಿ ಮಾ.21ರಂದು ನಡೆದಿದೆ.
ಜಮೀನಿನಲ್ಲಿರುವ ಪಾಳು ಬಾವಿಯಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ.ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಪರಿಶೀಲಿಸಿದಾಗ ಮೃತದೇಹ ಸಂಪೂರ್ಣ ಕೊಳೆತು ಹೋಗಿರೋದು ಗೊತ್ತಾಗಿದೆ. ಅಲ್ಲದೇ ಮೃತ ದೇಹ ಗುರುತು ಪತ್ತೆಹಚ್ಚಲು ಅಸಾಧ್ಯವಾದ ಸ್ಥಿತಿ ತಲುಪಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -