Sunday, April 28, 2024
Homeಕರಾವಳಿವಿಟ್ಲ: ಕನ್ಯಾನ ಗ್ರಾ.ಪಂ ಅಧ್ಯಕ್ಷ ಕೆ.ಪಿ ಅಬ್ದುಲ್ ರಹಿಮಾನ್ ರಿಂದ ಮಾನಭಂಗಕ್ಕೆ ಯತ್ನ, ಯುವತಿಯಿಂದ ದೂರು...

ವಿಟ್ಲ: ಕನ್ಯಾನ ಗ್ರಾ.ಪಂ ಅಧ್ಯಕ್ಷ ಕೆ.ಪಿ ಅಬ್ದುಲ್ ರಹಿಮಾನ್ ರಿಂದ ಮಾನಭಂಗಕ್ಕೆ ಯತ್ನ, ಯುವತಿಯಿಂದ ದೂರು ದಾಖಲು

spot_img
- Advertisement -
- Advertisement -

ವಿಟ್ಲ: ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಪಿ ಅಬ್ದುಲ್ ರಹಿಮಾನ್ ಅವರು ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ಗ್ರಾಮದ ಪಿಲಿಚಂಡಿಗುಡ್ಡೆಯಲ್ಲಿ ವಾಸವಿರುವ 23 ವರ್ಷದ ಯುವತಿ ಮನೆಗೆ ನೀರಿನ ಸಂಪರ್ಕದ ಬಗ್ಗೆ ಕನ್ಯಾನ ಪಂಚಾಯತ್ ಪಿಡಿಓ ಮತ್ತು ಸಿಬ್ಬಂದಿ ಬಂದಿದ್ದರು. ನಿಮ್ಮ ಮನೆ ನೀರಿನ ಸಂಪರ್ಕ ಕಡಿತಗೊಳಿಸುವ ಬಗ್ಗೆ ಅಧ್ಯಕ್ಷರು ತಿಳಿಸಿರುತ್ತಾರೆ ಎಂದು ತಿಳಿಸಿದಾಗ ಮಹಿಳೆ ನೀರಿನ ಬಿಲ್‌ ಪಾವತಿಸಿದ್ದೇನೆ ಎಂದು ತಿಳಿಸಿದ್ದು, ಈ ಸಂದರ್ಭ ನೀರಿನ ಸಂಪರ್ಕವನ್ನು ಕಡಿತಗೊಳಿಸದೇ ಅವರು ತೆರಳಿದ್ದರು ಎಂದು ಯುವತಿ ತಿಳಿಸಿದ್ದಾಳೆ

ಆದರೆ ಸಂಜೆ 4.30 ಗಂಟೆಯ ವೇಳೆಗೆ ಮನೆಯಲ್ಲಿ ಯಾರೂ ಇಲ್ಲದೆ ಇರುವಾಗ ಕನ್ಯಾನ ಗ್ರಾಮ ಪಂಚಾಯತ್‌ ಅಧ್ಯಕ್ಷ ಅಬ್ದುಲ್‌ ರಹಿಮಾನ ಅವರು ಬಂದು ಅವಾಚ್ಯ ಶಬ್ದಗಳಿಂದ ಮಾತನಾಡಿ ನೆಲಕ್ಕೆ ದೂಡಿ ಹಾಕಿ ಮಾನಭಂಗ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!