Friday, June 27, 2025
Homeಕರಾವಳಿಉಡುಪಿವಿ.ಕೆ ವಿಟ್ಲ ಸೇರಿ ದ.ಕ, ಉಡುಪಿ ಜಿಲ್ಲೆಯ ಮೂವರು ಶಿಕ್ಷಕರಿಗೆ ರಾಜ್ಯ ಮಟ್ಟದ ವಿಶೇಷ ಶಿಕ್ಷಕ...

ವಿ.ಕೆ ವಿಟ್ಲ ಸೇರಿ ದ.ಕ, ಉಡುಪಿ ಜಿಲ್ಲೆಯ ಮೂವರು ಶಿಕ್ಷಕರಿಗೆ ರಾಜ್ಯ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ

spot_img
- Advertisement -
- Advertisement -

ಮಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು(ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ)2024-25ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.

ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ”ಇವರ ಹೆಸರಿನಲ್ಲಿ 2024 ಸೆ. 05 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಾಥಮಿಕ ಶಾಲಾ ವಿಭಾಗದಿಂದ ಮೂಡಬಿದ್ರಿ ತಾಲ್ಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆಯಿಂದ ಯಮುನಾ ಕೆ, ಉಡುಪಿ ಜಿಲ್ಲೆಯ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ ರೆಂಜಾಳದಿಂದ ವಿನಾಯಕ ನಾಯ್ಕ(ಸಮಾಜ ವಿಜ್ಞಾನ ಶಿಕ್ಷಕರು), ದಕ್ಷಿಣ ಕನ್ನಡದ ಗುರುವಾಯನಕೆರೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಪ್ರೌಢ ಶಾಲೆಯ ವಿಶ್ವನಾಥ ಗೌಡ ಕೆ.(ಚಿತ್ರಕಲಾ ಶಿಕ್ಷಕರು, ವಿಶೇಷ ಶಿಕ್ಷಕರು) ಅವರು ಆಯ್ಕೆಯಾಗಿದ್ದಾರೆ.

ಮೇಲ್ಕಂಡ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಮುಖ್ಯ ಶಿಕ್ಷಕರು/ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ:ಇಪಿ 308 ಪಿಬಿಎಸ್ 2021, ದಿ. 12-09-2022ರ ಅನುಸಾರ ತಲಾ ರೂ.25,000/- ರಂತೆ ಒಟ್ಟು 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಣ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶಿಸಿದೆ ಎಂದು ಮಹಾಂತಯ್ಯ ಎಸ್. ಹೊಸಮಠ ಸರ್ಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!