- Advertisement -
- Advertisement -
ಉಡುಪಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಬ್ಲಾಕ್ ಸಮಿತಿಯ ನೇತೃತ್ವದಲ್ಲಿ ಭಾರತಕ್ಕಾಗಿ ನಡಿಗೆ ಕಾಲ್ನಡಿಗೆ ಜಾಥಾ ನಡೆಯಿತು. ಈ ಜಾಥಾದ ಮೂಲಕ ದೇಶಪ್ರೇಮದ ಸಂದೇಶವನ್ನು ಸಾರಲಾಯಿತು.
ಕನ್ನಾರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಿಂದ ಕಾಲ್ನಡಿಗೆ ಪ್ರಾರಂಭವಾಗಿ ಇಂದ್ರಾಳಿ ಬಸ್ ನಿಲ್ದಾಣದ ಬಳಿ ಸಮಾರೋಪ ಸಭೆ ನಡೆಯಿತು. ಕಾಂಗ್ರೆಸ್ ಮುಖಂಡರು ,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.
- Advertisement -