ಬೆಂಗಳೂರು: ರಾಜ್ಯದಲ್ಲಿನ ವಿವಿಧ ಜಿಲ್ಲೆಗಳ ರೈತರಿಗೆ ವಕ್ಫ್ ಬೋರ್ಡ್ ನೀಡಿದ ನೋಟಿಸ್ ಅನ್ನು ವಾಪಾಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಅವರು ಬೆಂಗಳೂರಿನ ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ತೀವ್ರ ಅಸಮಾಧಾನವನ್ನು ವ್ಯಕ್ತಡಿಸಿದರು. ನೋಟಿಸ್ ನೀಡುವಲ್ಲಿ ಕೆಲ ಅಧಿಕಾರಿಗಳು ತೆಗೆದುಕೊಂಡ ಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿ ಈ ಕ್ರಮವನ್ನು ತಿದ್ದುವಂತೆ ಸೂಚಿಸಿದರು. ಅಲ್ಲದೇ ಪಹಣಿಯಲ್ಲಿ ನಡೆದಿರುವ ತಿದ್ದುಪಡಿಗಳನ್ನು ಕೂಡ ತಕ್ಷಣವೇ ರದ್ದು ಮಾಡುವಂತೆ ಆದೇಶಿಸಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಯಾವುದೇ ತೊಂದರೆ ಆಗಬಾರದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ನಿರ್ಧಾರಿಸಿದ ಪ್ರಮುಖ ಆದೇಶಗಳು: ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಲಾಗಿರುವ ಅದೇಶವನ್ನು ತಕ್ಷಣ ವಾಪಾಸ್ ಪಡೆಯಬೇಕು. ರೈತರ ಸ್ವಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಖಚಿತಪಡಿಸಬೇಕು. ಕಾನೂನು ಬಹೀರ ತಿದ್ದುಪಡಿ ಅಥವಾ ನೋಟಿಸ್ ನೀಡದೆ ಪಹಣಿಯಲ್ಲಿ ಬದಲಾವಣೆ ಮಾಡಿದರೆ ಅವುಗಳನ್ನು ತಕ್ಷಣ ರದ್ದು ಮಾಡಬೇಕು.
ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್. ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರದಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.