- Advertisement -
- Advertisement -
ಬೆಳ್ತಂಗಡಿ JMFC ನ್ಯಾಯಾಲಯ ಸಿ ಸಿ ನಂಬ್ರ , 346/2017 ಕಲಂ 138 NI Act ಚೆಕ್ ಬೌನ್ಸ್ ಪ್ರಕರಣದ ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೂಡಾಯಿಬೆಟ್ಟು ನಿವಾಸಿ ಅಣ್ಣು ಪೂಜಾರಿ ಮಗನ ಸದಾನಂದ(44) ಎಂಬವರು ಕಳೆದ ಏಳು ವರ್ಷದಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಗ್ಗೆ ಮಾಹಿತಿ ಕಲೆ ಹಾಕಿ ಜ.19 ರಂದು ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ರವರ ಮಾರ್ಗದರ್ಶನದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿ ರಾಜೇಶ.ಎನ್ ಮತ್ತು ಗೋವಿಂದ ರಾಜ್ ರವರು ಚಾರ್ಮಾಡಿ ಪ್ರದೇಶದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದು ನ್ಯಾಯಾಲಯವು ಫೆ.1 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ
- Advertisement -