- Advertisement -
- Advertisement -
ಬೆಳ್ತಂಗಡಿ : ಅಪಘಾತ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 01/2014 ಕಲಂ. 279,304 (ಎ ) ಐಪಿಸಿಯ ಅಪಘಾತ ಪ್ರಕರಣದಲ್ಲಿ ಸುಮಾರು 4 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಗಣೇಶ್(48) ಎಂಬಾತನನ್ನು ಮಾರ್ಚ್ 6 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತ್ಯನಾರಾಯಣ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಹರೀಶ್ ಮತ್ತು ಸಬ್ ಇನ್ಸ್ಪೆಕ್ಟರ್ ಅರ್ಜುನ್ ನೇತೃತ್ವದ ಸಿಬ್ಬಂದಿ ವೃಷಭ, ಬಸವರಾಜ್, ದರೇಶ್ ರವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಿಂದ ದಸ್ತಗಿರಿ ಮಾಡಿ ಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಜಾಮೀನಿನಲ್ಲಿ ಬಿಡುಗಡೆ ಮಾಡಿದೆ.
- Advertisement -