
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದ CC No.535/2016ರಲ್ಲಿ ಐಪಿಸಿ ಕಲಂ 457, 380 ರಡಿ ದಾಖಲಾದ ಕಳ್ಳತನ ಪ್ರಕರಣದಲ್ಲಿ ವಾರಂಟ್ ಜಾರಿಯಾಗಿತ್ತು. ಪ್ರಕರಣದ ವಾರೆಂಟ್ ಆರೋಪಿ ಸುಳ್ಯ ತಾಲೂಕಿನ ಐವತ್ತೋಕ್ಲು ಗ್ರಾಮದ ನೆಲ್ಲಿಕಟ್ಟೆ ಮನೆ ನಿವಾಸಿ ಆದಮ್ ಅವರ ಪುತ್ರ ಮಹಮ್ಮದ್ ಶರೀಪ್ (46) ಎಂಬಾತನನ್ನು ಆ.13 ರಂದು ಬಂಧಿಸಿದ್ದಾರೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ ಮತ್ತು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ ವೇಣೂರು ಠಾಣಾ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಢವಗಿ ಅವರ ನೇತೃತ್ವದ ಸಿಬ್ಬಂದಿಗಳಾದ ಎಎಸ್ಐ ಬೆಣ್ಣಿಚನ್ ಮತ್ತು ಸಿಬ್ಬಂದಿ ಬಸವರಾಜ್ ಹಾಗೂ ಬೆಳ್ತಂಗಡಿ ಉಪವಿಭಾಗ ಕಚೇರಿ ಸಿಬ್ಬಂದಿ ಪ್ರವೀಣ್ ಮೂರುಗೋಳಿ ಅವರು ಪುತ್ತೂರಿನ ದರ್ಬೆಯಲ್ಲಿ ಮಹಮ್ಮದ್ ಶರೀಪ್ನನ್ನು ದಸ್ತಗಿರಿ ಮಾಡಿದ್ದಾರೆ.
ವೇಣೂರು ಠಾಣಾ ಸಿಬ್ಬಂದಿಗಳಾದ ನಿಕೋಲಸ್, ಬಸವರಾಜ್ ಹಾಗೂ ಆಕಾಶ ಅವರ ಭದ್ರತೆಯಲ್ಲಿ ಆರೋಪಿಯನ್ನು ಆ.13 ರಂದು ಸಂಜೆ ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


