- Advertisement -
![]()
- Advertisement -
ಬೆಂಗಳೂರು: ಗಣೇಶನಿಗೂ ಸಾವರ್ಕರ್ಗೂ ಏನು ಸಂಬಂಧ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ತಿಲಕರ ಫೋಟೋ ಹಾಕಿದರೆ ಅದಕ್ಕೊಂದು ಅರ್ಥವಿದೆ. ಸಾವರ್ಕರ್ ಫೋಟೋದಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.
ಬಿಜೆಪಿಯವರು ಅವರ ಪಕ್ಷವನ್ನ ಅವರೇ ಡಿಗ್ರೇಡ್ ಮಾಡಿಕೊಳ್ತಾರೆ. ಅವರ ತತ್ವ, ಸಿದ್ಧಾಂತವನ್ನು ಅವರೇ ಕೆಡಿಸಿಕೊಳ್ತಾರೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ. ಗಲಾಟೆ, ಗದ್ದಲ ಮಾಡಿಸುವುದೇ ಅವರ ಗುರಿ ಎಂದು ಕಿಡಿ ಕಾರಿದರು.
- Advertisement -


