Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

ಬೆಳ್ತಂಗಡಿ; ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

- Advertisement -
- Advertisement -

ಬೆಳ್ತಂಗಡಿ; ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ತಂಡವು ಫೆಬ್ರವರಿ 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ ನೀಡಿದರು. ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು.

ನಿರಂತರವಾಗಿ ಸೇವಾಭಾರತಿ ಸಂಸ್ಥೆಗೆ CSR ಅನುದಾನವನ್ನು ಒದಗಿಸುತ್ತಿರುವುದಕ್ಕಾಗಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್,  ಸೇವಾಭಾರತಿಯ ಟ್ರಸ್ಟಿ ಶ್ರೀ ಜೈ ರಾಜ್ ಸಾಲ್ಯಾನ್  ಕಾನರ್ಪ ಹಾಗೂ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ. ರವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!