ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಇಂದು ತೆರೆ ಎಳೆಯುವ ಸಾಧ್ಯತೆಯಿದೆ. ಈ ಬಾರಿಯ ಲೋಕಸಭಾ ಟಿಕೆಟ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೆಸರು ಮುಂಚೂಣಿಯಲ್ಲಿತ್ತು. ಆದರೆ ಸಂಸದರು ಮಾಧ್ಯಮಗಳಿಗೆ ನಿನ್ನೆ ನೀಡಿರುವ ಮಾಧ್ಯಮ ಹೇಳಿಕೆ ಪ್ರಕಾರ ಟಿಕೆಟ್ ಕೈತಪ್ಪುವ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.
ಇದೀಗ ಬಿಜೆಪಿ ಪಕ್ಷದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನಳಿನ್ ಕುಮಾರ್ ಕಟೀಲು, ಬ್ರಿಜೇಶ್ ಚೌಟ ಹೆಸರಿನೊಂದಿಗೆ ಪಕ್ಷದ ಸಾಮಾನ್ಯ ಕಾರ್ಯಕರ್ತ ಕಿಶೋರ್ ಕುಮಾರ್ ಬೊಟ್ಯಾಡಿ ಹೆಸರು ಕೂಡ ಸೇರಿಕೊಂಡಿದೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಅಂತಿಮ 3 ಜನರ ಹೆಸರಲ್ಲಿ ಕಿಶೋರ್ ಅವರ ಹೆಸರು ಇತ್ತು. ಆದರೆ ಅಂತಿಮವಾಗಿ ಆಶಾ ತಿಮ್ಮಪ್ಪರವರ ಹೆಸರು ನಿರ್ಧಾರವಾಗಿತ್ತು. ಇದೀಗ ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಗೆ ಈ ಬಾರಿಯ ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಬಹುತೇಕ ಫೈನಲ್ ಆಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿಯವರ ಹೆಸರು ಫೈನಲ್ ಆಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.