Sunday, June 29, 2025
Homeತಾಜಾ ಸುದ್ದಿ'ಸೈನಿಕರನ್ನು ನಿರಾಯುಧವಾಗಿ ಕಳುಹಿಸಿದ್ದು ಏಕೆ?'- ರಾಹುಲ್ ಗಾಂಧಿ

‘ಸೈನಿಕರನ್ನು ನಿರಾಯುಧವಾಗಿ ಕಳುಹಿಸಿದ್ದು ಏಕೆ?’- ರಾಹುಲ್ ಗಾಂಧಿ

spot_img
- Advertisement -
- Advertisement -

ದೆಹಲಿ, ಜೂನ್ 18: ಲಡಾಖ್‌ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಸೈನಿಕರನ್ನು ಹಿಂದೆ ಕಳುಹಿಸಲು ಹೋದ ಭಾರತೀಯ ಸೈನಿಕರು ಏಕೆ ನಿರಾಯುಧರಾಗಿದ್ದರು? ಆಯುಧಗಳಿಲ್ಲದೇ ಅವರನ್ನು ಏಕೆ ಕಳುಹಿಸಿದ್ದು? ಇದಕ್ಕೆ ಯಾರು ಹೊಣೆ? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟಂತೆ ಲಡಾಖ್‌ ಗಡಿ ಭಾಗದಲ್ಲಿ ಘರ್ಷಣೆಯಾದ ಸ್ಥಳದಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತಿ ಯೋಧರೊಬ್ಬರ ಸಂದರ್ಶನವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ ”ನಿರಾಯುಧರಾಗಿದ್ದ ನಮ್ಮ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ?” ಎಂದು ಟೀಕಿಸಿದ್ದಾರೆ.

ರಕ್ಷಣಾ ಸಚಿವರನ್ನೂ ತರಾಟೆಗೆ ತೆಗೆದುಕೊಂಡಿರುವ ಅವರು, ‘ಟ್ವಿಟರ್‌ನಲ್ಲಿ ಚೀನಾ ಹೆಸರನ್ನು ಉಲ್ಲೇಖಿಸದೇ ಭಾರತೀಯ ಸೇನೆಗೆ ಏಕೆ ಅಪಮಾನ ಮಾಡಿದಿರಿ? ಯೋಧರ ಸಾವಿಗೆ ಸಂತಾಪ ಸೂಚಿಸಲು ಎರಡು ದಿನ ತೆಗೆದುಕೊಂಡಿದ್ದು ಏಕೆ? ಅತ್ತ ಯೋಧರು ಹುತಾತ್ಮರಾಗುತ್ತಿರುವಾಗ ನೀವು ಚುನಾವಣಾ ಸಮಾವೇಶಗಳನ್ನು ನಡೆಸುವುದು ಎಷ್ಟು ಸರಿ’ ಎಂದು ರಾಜನಾಥ್ ಸಿಂಗ್ ಅವರನ್ನು ಪ್ರಶ್ನಿಸಿದ್ದಾರೆ.

ಸೋಮವಾರ ರಾತ್ರಿ (ಜೂನ್ 15) ಪೂರ್ವ ಲಡಾಖ್‌ನ ಕಣಿವೆ ಪ್ರದೇಶದ ಗಡಿ ಭಾಗದಲ್ಲಿ ಚೀನಾ ಮತ್ತು ಭಾರತ ಸೈನಿಕರ ನಡುವೆ ಘರ್ಷಣೆಯಾಗಿದ್ದು, ಇದರಲ್ಲಿ ಓರ್ವ ಸೈನ್ಯಾಧಿಕಾರಿ ಸೇರಿ ಇಪತ್ತು ಮಂದಿ ಯೋಧರನ್ನು ಹತ್ಯೆಯಾಗಿದ್ದಾರೆ.

- Advertisement -
spot_img

Latest News

error: Content is protected !!