Tuesday, May 14, 2024
Homeತಾಜಾ ಸುದ್ದಿಬಿಸಿಲೆಯ ಪಟ್ಲಬೆಟ್ಟದಲ್ಲಿ ನಡೆಯುತ್ತಿದೆ ಭಾರೀ ದಂಧೆ: ಪ್ರವಾಸಿಗರಿಂದ ಹಣ ದೋಚುತ್ತಿರುವ ಖಾಸಗೀ ಪಿಕಪ್‌ ಮಾಲೀಕರು:ಕಾನೂನು ಉಲ್ಲಂಘನೆಗೆ...

ಬಿಸಿಲೆಯ ಪಟ್ಲಬೆಟ್ಟದಲ್ಲಿ ನಡೆಯುತ್ತಿದೆ ಭಾರೀ ದಂಧೆ: ಪ್ರವಾಸಿಗರಿಂದ ಹಣ ದೋಚುತ್ತಿರುವ ಖಾಸಗೀ ಪಿಕಪ್‌ ಮಾಲೀಕರು:ಕಾನೂನು ಉಲ್ಲಂಘನೆಗೆ ಕಡಿವಾಣ ಯಾಕಿಲ್ಲ?  

spot_img
- Advertisement -
- Advertisement -

ಹಾಸನ: ಪಟ್ಲ ಬೆಟ್ಟದ ಮೇಲಿನಿಂದ ಒಂದು ದಿಕ್ಕಿಗೆ ಕೊಡಗು ಜಿಲ್ಲೆಯ ಮಲ್ಲಳ್ಳಿ ಜಲಪಾತ, ಇನ್ನೊಂದು ಕಡೆ ವೀವ್ ಪಾಯಿಂಟ ಕಾಣಿಸುತ್ತದೆ. ಬೆಟ್ಟದ ಎದುರಿಗೆ ಪುಷ್ಪಗಿರಿ ವನ್ಯದಾಮದ ಜೋಡಿ ಬೆಟ್ಟಗಳು ತಲೆ ಎತ್ತಿ ನಿಂತಿವೆ. ಈ ಎಲ್ಲಾ ಬೆಟ್ಟಗಳ ಸಾಲನ್ನು ಕುಮಾರ ಧಾರ ನದಿ ಸೀಳಿಕೊಂಡು ಹೋಗಿವೆ.

ಹಾಸನ ಜಿಲ್ಲಾ ಕೇಂದ್ರದಿಂದ ಪಟ್ಲಬೆಟ್ಟ 80 ಕಿ.ಮೀ ದೂರದಲ್ಲಿದೆ. ಸುಬ್ರಹ್ಮಣ್ಯದಿಂದ 30ಕಿಮೀ ದೂರದಲ್ಲಿರುವ ಈ ಬೆಟ್ಟ ವೀಕ್ಷಣೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಸುಮಾರು 3 ವರ್ಷಗಳಿಂದ ಈಚೆಗೆ ಭಾರಿ ಪ್ರಸಿದ್ಧ ಪಡೆದ ಈ ಬೆಟ್ಟದಲ್ಲಿ ಈಗೀಗ ಬಾರಿ ದೊಡ್ಡ ದಂಧೆಯೇ ಆಗುತ್ತಿದೆ.

ಅಲ್ಲಿ ಬಿಳಿ ಬೋರ್ಡ್ ನ ಖಾಸಗಿ ಪಿಕಪ್ ಗಳನ್ನು ಹೊಂದಿರುವ ವಾಹನ ಮಾಲಿಕರು ಬೆಟ್ಟಕ್ಕೆ ಖಾಸಗಿ ವಾಹನಗಳ ಮೂಲಕ ಸಂಚರಿಸಲು ಅವಕಾಶ ನೀಡುತ್ತಿಲ್ಲ. ತಮ್ಮ ಖಾಸಗಿ ಬಿಳಿ ನಂಬರ್ ಪ್ಲೇಟ್ ಹೊಂದಿರುವ ಪಿಕಪ್ ನಲ್ಲೇ ಬಾಡಿಗೆ ನಡೆಸಿ ಮತ್ತು ಅಪಾಯಕಾರಿ ರೀತಿ ಜನರನ್ನು ತುಂಬಿಸಿ ಕಾನೂನು ಉಲ್ಲಂಘಿಸಿದರೂ ಸಂಬಂಧಪಟ್ಟ ಇಲಾಖೆ ಮೌನವಾಗಿರುವುದೇ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.

ಒಂದು ವೇಳೆ ಖಾಸಗಿ ವಾಹನಗಳ ಮೂಲಕ ಸಂಚರಿಸಿದರೇ ಏನೇನೋ ನೆಪವೊಡ್ಡಿ ಜಗಳಕ್ಕೆ ಬರುತ್ತಾರೆ ಮತ್ತು ಹಲ್ಲೆಗೆ ಮುಂದಾಗುತ್ತಾರೆ. ಕೇವಲ 2 ಕಿಮೀ ಗೆ ಒಬ್ಬೊಬ್ಬ ಪ್ರವಾಸಿಗರತ್ರ ಸಾವಿರಾರು ರೂಪಾಯಿ ತೆಗೆದುಕೊಂಡು ಪಿಕಪ್ ನಲ್ಲಿ ಅಪಾಯಕಾರಿ ರೀತಿ ತುಂಬಿಸಿಕೊಂಡು ದೂರದ ಬೆಟ್ಟ ವೀಕ್ಷಣೆಗೆ ಕರೆದುಕೊಂಡು ಹೋಗುತ್ತಾರೆ.

ಬೆಟ್ಟದ ರಸ್ತೆಯು ಬಾರಿ ಅಪಾಯಕಾರಿ ಸ್ಥಿತಿಯಲ್ಲಿದೆ, ಕೇವಲ ಪಿಕಪ್ ವಾಹನಕ್ಕೆ ಸಂಚರಿಸಲು ಮಾತ್ರ ಸಾಧ್ಯವಾಗುವಂತೆ ಇಟ್ಟುಕೊಂಡಿದ್ದಾರೆ ಮತ್ತು ಪ್ರವೇಶ ಸ್ಥಳದಲ್ಲೇ ದೊಡ್ಡ ಹೊಂಡ ಮಾಡಿ ಪ್ರವಾಸಿಗರು ತಮ್ಮ ಸ್ವಂತ ವಾಹನದಲ್ಲಿ ಪ್ರವೇಶಿಸಲು ಹೆದರುವಂತೆ ಮಾಡುತ್ತಾರೆ ಎಂದು ಆರೋಪಿಸುತ್ತಾರೆ ಪ್ರವಾಸಿಗರು.

ರಸ್ತೆಯಲ್ಲಿ ಹಲವು ಪಿಕಪ್ ಗಳು ಮಗುಚಿ ಬಿದ್ದು, ಪ್ರವಾಸಿಗರಿಗೆ ಗಾಯಗಳಾದ ಘಟನೆಯೂ ನಡೆದಿದೆ ಎನ್ನುತ್ತಾರೆ ಬೆಂಗಳೂರಿನ ಪ್ರವಾಸಿಗರೊಬ್ಬರು. ಅರಣ್ಯ ಇಲಾಖೆ ಪ್ರಕಾರ ಪಟ್ಕ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿದೆ. ಆದರೆ ಅಲ್ಲಿ ಒಬ್ಬನೇ ಒಬ್ಬ ಅರಣ್ಯ ಇಲಾಖೆ ಸಿಬ್ಬಂದಿಯೂ ಇಲ್ಲ.

ಪಿಕಪ್ ವಾಹನದವರು ಪ್ರವಾಸಿಗರೊಂದಿಗೆ ನಡೆದುಕೊಳ್ಳುವ ರೀತಿಯ ವಿರುದ್ಧ ದೂರು ನೀಡಲು ಅಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯೂ ಇದೆ. ಅಲ್ಲಿ ಪೊಲೀಸ್ ಠಾಣೆಯ ಮಾಹಿತಿ ಬೋರ್ಡ್ ಕೂಡ ಇಲ್ಲ. ಸ್ಥಳಿಯ ಪೊಲೀಸ್ ಸಿಬ್ಬಂದಿಯೂ ಅಲ್ಲಿ ಭದ್ರತೆಗಿಲ್ಲ. ಪ್ರಸಿದ್ಧ ಪ್ರವಾಸಿ ತಾಣವನ್ನು ಈ ದಂಧೆಯಿಂದ ಮುಕ್ತಗೊಳಿಸಿ ಸೂಕ್ತ ರಕ್ಷಣೆ ಸಿಕ್ಕಿದರೆ ಬರುವ ಪ್ರವಾಸಿಗರ ಸಂಖ್ಯೆಯೂ ಜಾಸ್ತಿಯಾಗಬಹುದು.ಸ್ವಲ್ಪ ದೂರ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಿದರೆ ಪ್ರವಾಸಿಗರಿಗೂ ಮುಕ್ತವಾಗಿ ಈ ಬೆಟ್ಟದ ಸೊಬಗನ್ನು ವೀಕ್ಷಿಸಿಬಹುದು.

- Advertisement -
spot_img

Latest News

error: Content is protected !!