- Advertisement -
- Advertisement -
ಆಂಧ್ರಪ್ರದೇಶ: ಅಪಘಾತದಲ್ಲಿ ಮೃತಪಟ್ಟ ಗಂಡನ ನೆನಪಿಗಾಗಿ ದೇವಾಲಯ ಕಟ್ಟಿಸಿ ಪ್ರತಿ ದಿನ ಪೂಜೆ ಸಲ್ಲಿಸುತ್ತಿರುವ ಅಪರೂಪದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರದ ಪ್ರಕಾಶಂ ಜಿಲ್ಲೆಯಲ್ಲಿ ಪದ್ಮಾವತಿ ಎಂಬ ಮಹಿಳೆ ದೇಗುಲ ನಿರ್ಮಾಣ ಮಾಡಿ ಅದ್ರಲ್ಲಿ ಪತಿಯ ವಿಗ್ರಹ ಸ್ಥಾಪಿಸಿ ಆ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ. 4 ವರ್ಷದ ಹಿಂದೆ ಈ ಮಹಿಳೆಯ ಪತಿ ದುರಾದೃಷ್ಟವಶಾತ್ ಅಪಘಾತವೊಂದರಲ್ಲಿ ಮೃತಪಟ್ಟಿದ್ದರು.
ಪತಿಯ ಅಗಲಿಕೆಯಿಂದ ನೊಂದ ಪದ್ಮಾವತಿ ಅಮೃತಶಿಲೆಯಲ್ಲಿ ಪತಿಯ ಪ್ರತಿಮೆ ಸ್ಥಾಪಿಸಿ ಅದಕ್ಕೆ ನಿತ್ಯ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ. ಅಲ್ಲದೇ ತನ್ನ ಪತಿ ಜೀವಂತವಾಗಿದ್ದಾಗಲೂ ಅವರನ್ನ ದೇವರಂತೆ ಕಾಣುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.
- Advertisement -