- Advertisement -
- Advertisement -
ಸುಳ್ಯ; ಕಾಡು ಹಂದಿಗಳು ಗುತ್ತಿಗಾರು ಪೇಟೆಯಲ್ಲೇ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಇಂದು ಸಂಜೆಯ ವೇಳೆಗೆ ಗುತ್ತಿಗಾರಿನಿಂದ ಮೊಗ್ರ ಕಡೆಗೆ ಹೋಗುವ ರಸ್ತೆಯ ಬದಿ ಕಾಡುಹಂದಿಗಳು ಏಕಾಏಕಿ ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಡುಹಂದಿಗಳು ಗುತ್ತಿಗಾರು ಕೆಳಗಿನ ಪೇಟೆಯಿಂದ ಮೇಲಿನವರೆಗೆ ಪೇಟೆಯಲ್ಲೇ ಸಂಚರಿಸುವ ವೇಳೆ ಈ ದುರ್ಘಟನೆ ನಡೆದಿದೆ.
- Advertisement -