Sunday, May 19, 2024
Homeಇತರವಿಟ್ಲ: ಅಪರಿಚಿತರಿಂದ ಮಹಿಳೆ ಮೇಲೆ ಹಲ್ಲೆ ಪ್ರಕರಣ...! ನಾಲ್ವರು ಆರೋಪಿಗಳ ಬಂಧನ...!

ವಿಟ್ಲ: ಅಪರಿಚಿತರಿಂದ ಮಹಿಳೆ ಮೇಲೆ ಹಲ್ಲೆ ಪ್ರಕರಣ…! ನಾಲ್ವರು ಆರೋಪಿಗಳ ಬಂಧನ…!

spot_img
- Advertisement -
- Advertisement -

ವಿಟ್ಲ: ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಬರಂಗೋಡಿ ನಿವಾಸಿ ರಾಜೀವಿ ಎಂಬವರು ಸೆ 19 ರಂದು ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸೆ.19 ರಂದು ರಾಜೀವಿ ಅವರ ಫೋನಿಗೆ ಯಾರೋ ಅಪರಿಚಿತರು ಕರೆ ಮಾಡಿ ಬರಂಗೋಡಿ ತರವಾಡು ಮನೆಯ ವಿಚಾರವನ್ನು ಮಾತನಾಡಲು ಹಾಗೂ ಜಾಗವನ್ನು ನೋಡಲು ಬರುತ್ತೇವೆ ಎಂದು ತಿಳಿಸಿದ್ದರು. ಅಲ್ಲದೇ ನಮಗೆ ಅಲ್ಲಿಗೆ ಬರಲು ದಾರಿ ಗೊತ್ತಿಲ್ಲ, ದಾರಿ ತೋರಿಸಲು ರಸ್ತೆಗೆ ಬನ್ನಿ ಎಂದು ಹೇಳಿದ್ದರು.

ರಾಜೀವಿಯವರು ದಾರಿ ತೋರಿಸುವ ಉದ್ದೇಶದಿಂದ ಅಳಿಕೆ ಗ್ರಾಮದ ಶಾರದಾ ವಿಹಾರ ಬೈರಿಕಟ್ಟೆ ರಸ್ತೆ
ಬರಂಗೋಡಿ ಎಂಬಲ್ಲಿಗೆ ಬಂದಾಗ ಅಲ್ಲಿ ಹತ್ತಿರದ ತಿರುವಿನಲ್ಲಿ ನಿಂತಿದ್ದ ಓಮ್ಮಿ ಕಾರಿನಿಂದ ಇಬ್ಬರೂ ಅಪರಿಚಿತರು ಇಳಿದು ಬಂದು ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ,ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಅದೇ ವೇಳೆ ಆ ರಸ್ತೆಯಲ್ಲಿ ಬೈಕ್ ವೊಂದು ಬಂದ ಹಿನ್ನಲೆಯಲ್ಲಿ ಆರೋಪಿಗಳು ತಾವು ಬಂದ ಒಮ್ಮಿಯಲ್ಲಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಈ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ಕುದ್ದುಪದವು ನಿವಾಸಿ ಎಂ. ಕೃಷ್ಣ (37), ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ (54), ಬಾಯಾರು ನಿವಾಸಿ ಅಶೋಕ್ ಕುಮಾರ್ ಟಿ. (೩37), ಕಾಸರಗೋಡು ನಿವಾಸಿ ಚಂದ್ರಶೇಖರ ಸಿ (37) ಎಂಬವರನ್ನು ಬಂಧಿಸಿದ್ದಾರೆ.

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಅ.ಕ್ರ 124/2021ರಂತೆ 323,504,506 ಐಪಿಸಿಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ವೈಜ್ಞಾನಿಕ ತನಿಖೆಯ ಮೂಲಕ ವಿಟ್ಲ ಠಾಣೆ ಪೊಲೀಸರು ಆರೋಪಿಗಳನ್ನು ಬಂದಿಸಿದ್ದಾರೆ.

- Advertisement -
spot_img

Latest News

error: Content is protected !!