Friday, March 29, 2024
Homeತಾಜಾ ಸುದ್ದಿಪೋಷಕರ ಕಣ್ಮುಂದೆ ನದಿಗೆ ಹಾರಿ ಯುವತಿ ಆತ್ಮಹತ್ಯೆ!..

ಪೋಷಕರ ಕಣ್ಮುಂದೆ ನದಿಗೆ ಹಾರಿ ಯುವತಿ ಆತ್ಮಹತ್ಯೆ!..

spot_img
- Advertisement -
- Advertisement -

ವಿಜಯಪುರ:ಇಲ್ಲಿನ ಯುವತಿಯೊಬ್ಬಳು ಭೀಮಾ ನದಿಗೆ ಹಾರಿ ಪೋಷಕರ ಕಣ್ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಐಶ್ವರ್ಯ ಶ್ರೀಪಾಲ ಕಬ್ಬಿನ(20) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು, ಮೂಲತಃ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿಯಾಗಿರುವ ಈಕೆ, ತನ್ನ ಕುಟುಂಬದವರೊಂದಿಗೆ ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ನದಿಗೆ ಹಾರಿದ್ದಾಳೆ.


ಐಶ್ವರ್ಯಾ ತನ್ನ ಕುಟುಂಬಸ್ಥರ ಜೊತೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗುತ್ತಿದ್ದಳು.ಈ ವೇಳೆ ವಿಜಯಪುರ ಜಿಲ್ಲೆಯ ಆಲಮೇಲ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಬಳಿ ಬರುತ್ತಿದ್ದಂತೆಯೇ ವಾಹನವನ್ನು ನಿಲ್ಲಿಸುವಂತೆ ಹೇಳಿದ್ದಾಳೆ. ನದಿಗೆ ನಾಣ್ಯ ಹಾಕಬೇಕು ಎಂದು ಹೇಳಿ ವಾಹನದಿಂದ ಇಳಿದು ಸೇತುವೆಯ ಬಳಿ ಹೋಗಿ ತಕ್ಷಣವೇ ನದಿಗೆ ಹಾರಿದ್ದಾಳೆ. ಯುವತಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತನಿಖೆಯಿಂದ ತಿಳಿಯಬೇಕಿದೆ.

- Advertisement -
spot_img

Latest News

error: Content is protected !!