ಅಹಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ 242 ಪ್ರಯಾಣಿಕರಲ್ಲಿ 241 ಪ್ರಯಾಣಿಕರು ಸಾವನ್ನಪ್ಪಿದ್ದು ಓರ್ವ ಪ್ರಯಾಣಿಕ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಅಲ್ಲದೇ ಮಹಿಳೆಯೊಬ್ಬರು ಜಸ್ಟ್ 10 ನಿಮಿಷಗಳ ಅಂತರದಲ್ಲಿ ಬದುಕಿ ಉಳಿದಿದ್ದಾರೆ.
ಹೌದು.. ಏರ್ ಇಂಡಿಯಾ ವಿಮಾನ AI-171 ಅಪಘಾತಕ್ಕೀಡಾದ ಕೆಲವೇ ನಿಮಿಷಗಳ ಮೊದಲು, ಭೂಮಿ ಚೌಹಾಣ್ ಎಂಬ ಮಹಿಳೆ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಕೇವಲ 10 ನಿಮಿಷಗಳ ಅಂತರದಲ್ಲಿ ಅವರಿಗೆ ವಿಮಾನ ಮಿಸ್ ಆಗಿತ್ತು.ಅಂದಹಾಗೆ ಮಧ್ಯಾಹ್ನ 1:30 ರ ಸುಮಾರಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಹೊರಟಿದ್ದ ಚೌಹಾಣ್, ಸಂಚಾರ ದಟ್ಟಣೆಯಿಂದಾಗಿ ಕೇವಲ 10 ನಿಮಿಷಗಳ ಅಂತರದಲ್ಲಿ ವಿಮಾನ ತಪ್ಪಿಸಿಕೊಂಡರು. ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1:38ಕ್ಕೆ ವಿಮಾನ ನಿಲ್ದಾಣದ ಆಸುಪಾಸಿನ ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು. ನನಗೆ ತುಂಬಾನೇ ನೋವಾಗಿದೆ. ನಾನು ದೇವರಿಗೆ ಕೃತಜ್ಞಳಾಗಿದ್ದೇನೆ. ಗಣಪತಿ ಬಪ್ಪಾ ನನ್ನನ್ನು ಕಾಪಾಡಿದರು ಎಂದಿದ್ದಾರೆ.
ಲಂಡನ್ನಲ್ಲಿ ತಮ್ಮ ಪತಿಯೊಂದಿಗೆ ವಾಸಿಸುತ್ತಿರುವ ಭೂಮಿ ಚೌಹಾಣ್, ಎರಡು ವರ್ಷಗಳ ನಂತರ ರಜೆಗಾಗಿ ಭಾರತಕ್ಕೆ ಆಗಮಿಸಿದ್ದರು. ಆದರೆ ಮತ್ತೆ ಮರಳಿ ಪ್ರಯಾಣಿಸುವಾಗ ಆ 8 ನಿಮಿಷಗಳ ತಡವಾದ ಕಾರಣದಿಂದಾಗಿ ನಾನು ವಿಮಾನವನ್ನು ತಪ್ಪಿಸಿಕೊಂಡರು. ಈ ಘಟನೆ ಬಗ್ಗೆ ಹೇಗೆ ವಿವರಿಸಬೇಕು ಎಂಬುದೇ ತೋಚುತ್ತಿಲ್ಲ. ಮಾತು ಬರುತ್ತಿಲ್ಲ. ಅಕ್ಷರಶಃ ನಾನೀಗ ಬ್ಲ್ಯಾಂಕ್ ಆಗಿದ್ದೇನೆ ಎಂದು ಅವರು ಹೇಳಿದ್ದಾರೆ.