- Advertisement -
- Advertisement -
ಸುಳ್ಯ: ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ.
ಉಳುವಾರು ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿ ಎಂಬವರು ಶನಿವಾರ ಸಂಜೆ ಅರಂತೋಡಿನ ಮಾಡದ ಬಳಿ ಇರುವ ಹೊಳೆಗೆ ಬಟ್ಟೆ ಒಗೆಯಲೆಂದು ಹೋದವರು ಇದುವರೆಗೆ ಮನೆಗೆ ಹಿಂತಿರುಗಲಿಲ್ಲ.
ನಿನ್ನೆ ರಾತ್ರಿಯಿಂದ ಮನೆಯವರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದರೂ ಇನ್ನೂ ಪತ್ತೆಯಾಗಲಿಲ್ಲ. ನಿನ್ನೆ ಬೆಳಗ್ಗಿನಿಂದಲೇ ಹುಡುಕಾಟದಲ್ಲಿ ತೊಡಗಿದ್ದಾರೆ. ಇಲ್ಲಿಯವರೆಗೂ ಆಕೆಯ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.
- Advertisement -