Monday, May 6, 2024
Homeಕರಾವಳಿಕಡಬ:ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಪ್ರಕರಣ: ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ...

ಕಡಬ:ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಪ್ರಕರಣ: ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಕಡಬ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕರ್ತವ್ಯದ ವೇಳೆ ಅಜಾಗರೂಕತೆ ವಹಿಸಿದ ಬಸ್ ಚಾಲಕ  ಅಬ್ದುಲ್ ರಝಾಕ್ ಮತ್ತು ನಿರ್ವಾಹಕ ಗುರುನಾಥ ಅವರ ವಿರುದ್ದ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ  ನಡೆದ ಈ ದುರ್ಘಟನೆ ಸಂಬಂಧಿಸಿ  ಬೆಂಗಳೂರು ನಂದಿನಿ ಲೇಔಟ್  ರಾಜಣ್ಣ ಎಂಬವರು ಠಾಣೆಗೆ ದೂರು ನೀಡಿದ್ದರು . ಈ ಬಗ್ಗೆ ಕಡಬ ಪೊಲೀಸ್ ಠಾಣಾ ಅ.ಕ್ರ 102/2022 ಕಲಂ: ಕಲಂ:279. 304(A) ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

ಘಟನೆ ಸುದ್ದಿ ತಿಳಿದು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ  ಹಾಗೂ ಇತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿ  25 ಸಾವಿರ ರೂ. ಮಧ್ಯಾಂತರ ಪರಿಹಾರ ಹಸ್ತಾಂತರಿಸಿದರು.  ಕಾನೂನು ಪ್ರಕ್ರಿಯೆ ಮುಗಿದ ಬಳಿಕ ವಿಮಾ ಪರಿಹಾರ ನೀಡಲಾಗುವುದು  ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!