ಉಪ್ಪಿನಂಗಡಿಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಮಂಗಳೂರಿನಲ್ಲಿ ಪತ್ತೆಯಾಗಿದ್ದು ಗಂಡನೊಂದಿಗೆ ತೆರಳಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.
ಉಪ್ಪಿನಂಗಡಿಯ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿಂದ ನಾಪತ್ತೆಯಾಗಿದ್ದ 31 ವರ್ಷ ಮಹಿಳೆ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಆದರೆ ಇದೀಗ ಮಹಿಳೆ ಪತಿ ಮಕ್ಕಳನ್ನು ತೊರೆದು ಸ್ವತಂತ್ರಳಾಗಿ ಜೀವನ ನಡೆಸುತ್ತೇನೆ ಅವರೊಂದಿಗೆ ತೆರಳೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ದೇರಣೆ ನಿವಾಸಿ ನಾರಾಯಣ ಅವರು, ಪತ್ನಿ ಆ. 23ರಂದು ಪುತ್ತೂರಿನ ಸಿಟಿ ಆಸ್ಪತ್ರೆಗೆ ಹೋಗಿ ಬರುತ್ತೇನೆಂದ ಹೇಳಿ ಮನೆಯಿಂದ ಹೋದಾಕೆ ನಾಪತ್ತೆಯಾಗಿದ್ದರು. ಪತಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪೊಲೀಸರು ಹುಡುಕಾಟ ನಡೆಸಿದಾಗ ಮಂಗಳೂರಿನ ಪಿ.ಜಿ.ಯೊಂದರಲ್ಲಿ ವಾಸ್ತವ್ಯವಿದ್ದ ಮಹಿಳೆಯನ್ನು ಪತ್ತೆ ಮಾಡಿದ್ದರು.
ಈ ವೇಳೆ ನನಗೆ ಗಂಡ ಹಾಗೂ ಮಕ್ಕಳೊಂದಿಗೆ ಇರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಬ್ಬರು ಮಕ್ಕಳನ್ನು ಮತ್ತು ಪತಿಯನ್ನು ತೊರೆದು ಮಂಗಳೂರಿನಲ್ಲಿ ಉದ್ಯೋಗವೊಂದಕ್ಕೆ ಸೇರಿರುವುದಾಗಿ ಮಹಿಳೆ ತಿಳಿಸಿದ್ದಾರೆ.