- Advertisement -
- Advertisement -
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಇಂದು ಕಲ್ಲುರ್ಟಿ ಮತ್ತು ಕಲ್ಕುಡ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ್ ತಂತ್ರಿ ಮತ್ತು ಶಿಲ್ಪಿಗಳಾದ ಮಹೇಶ್ ಮುನಿಯಂಗಳ ಮಾರ್ಗದರ್ಶನದಲ್ಲಿ ಈ ಕಾರ್ಯ ನೆರವೇರಿತು. ದೇವಸ್ಥಾನದ ಅರ್ಚಕರಾದ ರಾಮಚಂದ್ರ ಶಬರಾಯ ಪೂಜಾ ಕಾರ್ಯ ಮಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ. ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರು, ದೇವಾಲಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
- Advertisement -