- Advertisement -
- Advertisement -
ಪುತ್ತೂರು: ಬೆಟ್ಟಂಪಾಡಿಯಲ್ಲಿ ಕಾರ್ಮಿಕರೊಬ್ಬರು ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45).
ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಸಯ್ಯದ್ ಅವರು ಅಡಿಕೆ ಕೊಯ್ಯಲು ತೆರಳಿದ್ದರು. ಈ ವೇಳೆ ಅಡಿಕೆ ಕೊಯ್ಯುವಾಗ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಇವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
- Advertisement -