ಶೃಂಗೇರಿ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದ ಶೃಂಗೇರಿಯ ವಿದ್ಯಾನಗರ ಶಾಲೆಯ ಶಿಕ್ಷಕ Y.J ರಾಮೇಗೌಡ ರಾಷ್ಟ್ರಮಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಅವರು ಡಿಸ್ಕಸ್ ಥ್ರೋ (ತಟ್ಟೆ ಎಸೆತ) ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Y.J ರಾಮೇಗೌಡ ಅವರು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪರಿಪಕ್ವವಾಗುವಂತೆ ಹೇಳಿಕೊಡುವುದರ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿರುವ ಶಿಕ್ಷಕರಾಗಿದ್ದಾರೆ. ಅವರಿಗೆ ವಿದ್ಯಾನಗರ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕವೃಂದ, ಹಾಗೂ ಶೃಂಗೇರಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀಚಂದ್ರಶೇಖರ್ ನಾಯ್ಕ್ ಎಸ್, ಕಾರ್ಯದರ್ಶಿ ಶ್ರೀ ಶಶಿಧರ್, ರಾಜ್ಯ ಪರಿಷತ್ ಸದಸ್ಯರಾದ ಶ್ರೀ ರವೀಂದ್ರ ಎಂ.ಬಿ, ಖಜಾಂಚಿ ಶ್ರೀ ಸೋಮಯ್ಯ ಹಾಗೂ ಸಂಘದ ಸರ್ವ ಸದಸ್ಯರು ಪದಾಧಿಕಾರಿಗಳು ಸೇರಿದಂತೆ ಅನೇಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.