Monday, March 17, 2025
HomeUncategorizedಮಂಗಳೂರು: ಅಪಘಾತದಲ್ಲಿ  ಗಂಭೀರವಾಗಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಆನಂದ ಕಟೀಲು ನಿಧನ

ಮಂಗಳೂರು: ಅಪಘಾತದಲ್ಲಿ  ಗಂಭೀರವಾಗಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಆನಂದ ಕಟೀಲು ನಿಧನ

spot_img
- Advertisement -
- Advertisement -

ಮಂಗಳೂರು: ಅಪಘಾತದಲ್ಲಿ  ಗಂಭೀರವಾಗಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಆನಂದ ಕಟೀಲು(47) ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಆನಂದ್ ಅವರು ಕಿನ್ನಿಗೋಳಿಯಲ್ಲಿ ಜ.1ರಂದು ತಮ್ಮ ಆಟೋ ರಿಕ್ಷಾ ಓಡಿಸುತ್ತಿದ್ದಾಗ ರಿಕ್ಷಾ ಪಲ್ಟಿಯಾಗಿದ್ದು, ತೀವ್ರ ಗಾಯಗೊಂಡಿದ್ದರು.ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕುತ್ತಿಗೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ಶಸ್ತ್ರ ಚಿಕಿತ್ಸೆ ನಡೆಸಲು 8 ಲಕ್ಷ ರೂ.ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದರಿಂದ ಅವರನ್ನು ಅಲ್ಲಿಂದ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎದ್ದು ಕುಳಿತುಕೊಳ್ಳುವುದಕ್ಕೆ ಆಗದೇ ಬಳಲುತ್ತಿದ್ದರು. 25 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅವರು ಜ.25 ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ಕಟೀಲು ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿದ್ದರು.

- Advertisement -
spot_img

Latest News

error: Content is protected !!