Saturday, April 20, 2024
Homeಕ್ರೀಡೆಚುನಾವಣೆಯ ಬಿಸಿಯ ನಡುವೆಯೂ ಐಪಿಎಲ್ ಪಂದ್ಯ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಚುನಾವಣೆಯ ಬಿಸಿಯ ನಡುವೆಯೂ ಐಪಿಎಲ್ ಪಂದ್ಯ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ಚುನಾವಣೆಯ ಬ್ಯುಸಿಯ ನಡುವೆಯೂ ವಿಪಕ್ಷ ನಾಯಕ ಸಿದ್ಧರಾಮಯ್ಯ ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಾವಳಿ ವೀಕ್ಷಿಸಿದ್ದಾರೆ.ಒಂದೆಡೆ ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದರೇ, ಮತಬೇಟೆಯಲ್ಲೂ ಅಭ್ಯರ್ಥಿಗಳು ಬ್ಯುಸಿಯಾಗಿದ್ದಾರೆ.

ಆದ್ರೇ ಈ ವಿಧಾನಸಭಾ ಚುನಾವಣೆಯ ರಣರಂಗದ ಬ್ಯುಸಿಯ ನಡುವೆಯೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತ್ರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಂತ ಆರ್ ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ವೀಕ್ಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು ಕ್ರಿಕೆಟ್ ನನ್ನ ಇಷ್ಟದ ಆಟ. ಆರ್‌ಸಿಬಿ ನನ್ನ ಹೆಮ್ಮೆಯ ತಂಡ.. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ.. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದಿದ್ದಾರೆ. ಇನ್ನು ಸಿದ್ದರಾಮಯ್ಯ ಅವರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸಾಥ್ ನೀಡಿದ್ರು.

- Advertisement -
spot_img

Latest News

error: Content is protected !!