- Advertisement -
- Advertisement -
ಬಂಟ್ವಾಳ; ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಸಿ ರೋಡಿನ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ.
ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್(26) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಅವಿವಾಹಿತನಾಗಿದ್ದು ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದ. ನಿನ್ನೆ ದೊಡ್ಡಮ್ಮ ಮನೆಯಲ್ಲಿ ಇಲ್ಲದ ವೇಳೆ ಶಿವಕುಮಾರ್ ಓರ್ವನೇ ಮನೆಯಲ್ಲಿದ್ದ. ಈ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -