Sunday, May 19, 2024
Homeಕರಾವಳಿಉಡುಪಿಕಾರ್ಕಳದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವು

ಕಾರ್ಕಳದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವು

spot_img
- Advertisement -
- Advertisement -

ಕಾರ್ಕಳ;ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ  ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಬಳಿ ನಡೆದಿದೆ.ಶಿರ್ಲಾಲು ಹಾಡಿಯಂಗಡಿ ನಿವಾಸಿ ರಜನೀಶ್(18) ಮೃತ ಯುವಕ.ರಜನೀಶ ಕಳೆದ ಹಲವು ವರ್ಷಗಳಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ರಜನೀಶ್ ಗೆ 3 ವಾರದ ಹಿಂದೆ ಉಡುಪಿಯ ಅಜ್ಜರಕಾಡಿನ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.ಇದಾದ 10 ದಿನಗಳ ನಂತರ ಶಸ್ತ್ರ ಚಿಕಿತ್ಸೆಯ ಹೊಲಿಗೆ ತೆಗೆಸಿ,ವಾಂತಿ ಹಾಗೂ ಜ್ವರಕ್ಕೆ ಔಷಧಿ ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇದ್ದಕ್ಕಿದ್ದಂತೆ ರಜನೀಶ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!