- Advertisement -
- Advertisement -
ಕಾರ್ಕಳ;ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಬಳಿ ನಡೆದಿದೆ.ಶಿರ್ಲಾಲು ಹಾಡಿಯಂಗಡಿ ನಿವಾಸಿ ರಜನೀಶ್(18) ಮೃತ ಯುವಕ.ರಜನೀಶ ಕಳೆದ ಹಲವು ವರ್ಷಗಳಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ರಜನೀಶ್ ಗೆ 3 ವಾರದ ಹಿಂದೆ ಉಡುಪಿಯ ಅಜ್ಜರಕಾಡಿನ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.ಇದಾದ 10 ದಿನಗಳ ನಂತರ ಶಸ್ತ್ರ ಚಿಕಿತ್ಸೆಯ ಹೊಲಿಗೆ ತೆಗೆಸಿ,ವಾಂತಿ ಹಾಗೂ ಜ್ವರಕ್ಕೆ ಔಷಧಿ ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ. ನಿನ್ನೆ ಇದ್ದಕ್ಕಿದ್ದಂತೆ ರಜನೀಶ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
- Advertisement -