Monday, April 29, 2024
Homeಕರಾವಳಿಬಂಟ್ವಾಳದ ಸರಪಾಡಿಯಲ್ಲಿ ಯುವಕ ಆತ್ಮಹತ್ಯೆ

ಬಂಟ್ವಾಳದ ಸರಪಾಡಿಯಲ್ಲಿ ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ  ಸರಪಾಡಿ ಗ್ರಾಮದ ಪೆರ್ಲ ದರ್ಖಾಸು ಬಳಿ ಭಾನುವಾರ ರಾತ್ರಿ ನಡೆದಿದೆ. ಪೆರ್ಲ ದರ್ಖಾಸು ನಿವಾಸಿ ಕೃಷ್ಣಪ್ಪ ನಾಯ್ಕ್ ಅವರ ಪುತ್ರ ವಿನೋದ್ ನಾಯ್ಕ್(33) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿನೋದ್  ಕೂಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.  ಅವಿವಾಹಿತನಾಗಿದ್ದ ವಿನೋದ್ ತಂದೆ- ತಾಯಿ, ಅಕ್ಕ ಹಾಗೂ ತಮ್ಮನನ್ನು ಅಗಲಿದ್ದಾನೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮೃತ ಯುವಕನ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- Advertisement -
spot_img

Latest News

error: Content is protected !!