Saturday, May 18, 2024
Homeಕರಾವಳಿಬೆಳ್ತಂಗಡಿ: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

spot_img
- Advertisement -
- Advertisement -

ಬೆಳ್ತಂಗಡಿ: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ಹೋದ  ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪುದುವೆಟ್ಟು ಗ್ರಾಮದ ಶಾಂತಿ ಹೊಳೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕಂಚೇರಿ ಕಂಡ ನಿವಾಸಿ ಜೈಸನ್‌ ಪಿ.ವಿ. (34) ತನ್ನ ಅಕ್ಕನ ಮನೆಗೆ ಹೋಗಿದ್ದರು. ಈ ವೇಳೆ ಗೆಳೆಯ ಸ್ಟ್ಯಾನ್ಲಿಯೊಂದಿಗೆ ರವಿವಾರ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಗೆ ಸ್ನಾನಕ್ಕೆಂದು ಬೈಕ್‌ನಲ್ಲಿ ತೆರಳಿದ್ದಾರೆ.  ಸ್ನಾನಕ್ಕೆ ಇಳಿದ ಜೈಸನ್‌ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹವು ಪತ್ತೆಯಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!