Sunday, April 28, 2024
Homeಕರಾವಳಿಉಡುಪಿಉಡುಪಿ;ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವು

ಉಡುಪಿ;ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವು

spot_img
- Advertisement -
- Advertisement -

ಉಡುಪಿ;ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಉಡುಪಿಯ ಮಣಿಪಾಲದ ಪರ್ಕಳ  ಹೆದ್ದಾರಿಯ ಬಿ.ಎಂ.ಸ್ಕೂಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ.ಹಿರಿಯಡ್ಕ ನಿವಾಸಿ ಅಕ್ಷಯ ಭಟ್(26) ಮೃತ ದುರ್ದೈವಿ .
ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಟ್ ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆಯ ಅಡುಗೆ ಕೆಲಸ ನಿರ್ವಹಿಸಲು ಮುಂಜಾನೆ ಮನೆಯಿಂದ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ .

ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಅಕ್ಷಯ ಭಟ್ ತಲೆಗೆ ತೀವ್ರ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲದ ಪೊಲೀಸರು ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಅಕ್ಷಯ್ ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

- Advertisement -
spot_img

Latest News

error: Content is protected !!