- Advertisement -
- Advertisement -
ಬಾಗಲಕೋಟೆ: ಊರಿಗೆ ಹೊರಟಿದ್ದ ಯುವಕನೊಬ್ಬ ಬಸ್ನಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಳಕಲ್ ತಾಲೂಕಿನ ಕರಡಿ ಗ್ರಾಮದ ಸುನೀಲ್ ಹನಮಗೌಡ ಪಾಟೀಲ(25) ಮೃತ ಯುವಕ.
ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಸುನೀಲ್ ಮಂಗಳೂರು-ಕರಡಿ ಮಾರ್ಗದ ಸಾರಿಗೆ ಬಸ್ನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದ. ಇಳಕಲ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದಾಗ ಯುವಕ ಮೃತಪಟ್ಟಿರುವುದು ಗೊತ್ತಾಗಿದೆ.
ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾಪಸ್ ಊರಿಗೆ ಹೋಗುತ್ತಿದ್ದ ಎನ್ನಲಾಗಿದೆ. ಹೆತ್ತವರ ಮಡಿಲು ಸೇರುವ ಮುನ್ನವೇ ಮಾರ್ಗದಲ್ಲೇ ಸಾವನ್ನಪ್ಪಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.ಸ್ಥಳಕ್ಕೆ ಭೇಟಿ ನೀಡಿದ ಇಳಕಲ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -