Friday, May 3, 2024
Homeಕರಾವಳಿಮಂಗಳೂರು: ಕಲ್ಲಿನ ಕೋರೆಗೆ ಈಜಲು‌ ಹೋಗಿ ಯುವಕ‌ ಸಾವು

ಮಂಗಳೂರು: ಕಲ್ಲಿನ ಕೋರೆಗೆ ಈಜಲು‌ ಹೋಗಿ ಯುವಕ‌ ಸಾವು

spot_img
- Advertisement -
- Advertisement -

ಮಂಗಳೂರು: ಕಲ್ಲಿನ ಕೋರೆಗೆ ಈಜಲು ಇಳಿದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ  ಮಂಗಳೂರಿನ ಮಲ್ಲೂರು ಸಮೀಪದ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ನಡೆದಿದೆ.

ಜೋಕಟ್ಟೆಯ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತ ಯುವಕ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ‌ ಪ್ರಕರಣ  ದಾಖಲಾಗಿದೆ.

ಇಂದು ಬೆಳಗ್ಗೆ ಶಿಯಾಝ್ ಉಳಾಯಿಬೆಟ್ಟುವಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆಯ ವೇಳೆಗೆ ತನ್ನ ಸ್ನೇಹಿತರೊಂದಿಗೆ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವುನಲ್ಲಿರುವ ಕಲ್ಲಿನ ಕೋರೆಗೆ ಈಜಲು ಇಳಿದಿದ್ದರು. ಈ ಸಂದರ್ಭ ಕೋರೆಯ ಆಳ ತಿಳಿಯದೆ ಈಜಲು ಮುಂದಾಗಿದ್ದು, ಈ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ

- Advertisement -
spot_img

Latest News

error: Content is protected !!