- Advertisement -
- Advertisement -
ಪುತ್ತೂರು; ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಹಾಗೂ ಅವರ ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಅದರಲ್ಲಿ ನಿಝಾಮ್ ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಹಣ ನೀಡಿದರೆ ಮತ್ತೋರ್ವನನ್ನು ಬಿಡುಗಡೆಗೊಳಿಸುತ್ತೇವೆ ಎಂದು ಅಪಹರಣಕಾರರ ತಂಡ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಪರಿಚಿತರ ತಂಡ ಇಬ್ಬರನ್ನೂ ಮಂಗಳೂರಿನ ಮಲ್ಲೂರಿಗೆ ಕರೆದೊಯ್ದಿದ್ದರು ಎನ್ನಲಾಗಿದೆ., ಈ ಘಟನೆ ಸಂಬಂಧಿಸಿದಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರ ವಿಚಾರಣೆಯ ಬಳಿಕ ಸತ್ಯ ಸಂಗತಿ ಬಯಲಾಗಲಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- Advertisement -