- Advertisement -
- Advertisement -
ಹಾಸನ; ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಹೊರಟಿದ್ದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಲವ(22) ನಾಪತ್ತೆಯಾದ ಯುವಕ.
ಲವ ತನ್ನ ಗ್ರಾಮದಿಂದ 50 ಜನ ಪಾದೆಯಾತ್ರಿಗಳೊಂದಿಗೆ ಧರ್ಮಸ್ಥಳಕ್ಕೆ ಹೊರಟಿದ್ದ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದಾನೆ. ಈತ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದ ಎನ್ನಲಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -