- Advertisement -
- Advertisement -
ಸುಳ್ಯ; ಒಣಗಿದ ಅಡಿಕೆ ರಾಶಿಯಲ್ಲಿ ಯುವಕನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಮೃತ ದುರ್ದೈವಿ.
ಸೈಬಿನ್ ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಇಂದು ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ
- Advertisement -