ತಮಿಳುನಾಡು:ಇಲ್ಲಿನ ನಾಗರ್ಕೊಯಿಲ್ ನಿವಾಸಿ ಯೊಬ್ಬ ಕೆಲಸವಿಲ್ಲ ಎಂದು ಪರಿತಪಿಸುತ್ತಿದ್ದು, ಉದ್ಯೋಗ ಸಿಕ್ಕ ತಕ್ಷಣ ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ದೇವರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಈ ನಿರ್ಧಾರ ಮಾಡಿದ್ದಾಗಿ ಡೆತ್ನೋಟ್ನಲ್ಲಿ ಆತ ಬರೆದಿಟ್ಟಿದ್ದಾನೆ.
ನವೀನ್ (32) ಮೃತವ್ಯಕ್ತಿ. ಈತನು ತುಂಬ ದಿನಗಳಿಂದ ಉದ್ಯೋಗ ಸಿಕ್ಕಿರಲಿಲ್ಲ ಎಂದು ನೊಂದಿದ್ದ. ಹಾಗೇ ‘ನನಗೊಂದು ಒಳ್ಳೆಯ ಕೆಲಸ ಸಿಕ್ಕಿಬಿಟ್ಟರೆ ನಾನು ಬಂದು ನಿನ್ನೊಂದಿಗೇ ಇರುತ್ತೇನೆ’ ಎಂದು ದೇವರಿಗೆ ಹರಕೆಯನ್ನೂ ಕಟ್ಟಿಕೊಂಡಿದ್ದ.ಅದಾದ ಕೆಲವೇ ದಿನಗಳಲ್ಲಿ ನವೀನ್ಗೆ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ ಬ್ರ್ಯಾಂಚ್ನಲ್ಲಿ ಒಂದೊಳ್ಳೆ ಉದ್ಯೋಗವೂ ಸಿಕ್ಕಿತು. ಆದರೆ ನವೀನ್ ಅಲ್ಲಿ ಕೆಲಸ ಮಾಡಿದ್ದು 15 ದಿನಗಳು ಮಾತ್ರ.
ನಂತರದಲ್ಲಿ ತಿರುವನಂತಪುರಂಗೆ ವಿಮಾನದ ಮೂಲಕ ತೆರಳಿದ ನವೀನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.