- Advertisement -
- Advertisement -
ಶಿವಮೊಗ್ಗ: ಆಗುಂಬೆಯ 24 ವರ್ಷದ ಯುವತಿಯೊಬ್ಬಳು ಕಳೆದ ಕೆಲವು ದಿನಗಳಿಂದ ನಾಪತ್ತೆ ಆಗಿದ್ದು, ಕೊಲೆಯಾಗಿರುವ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಆಕೆಯನ್ನು ಸ್ನೇಹಿತನೇ ಕೊಲೆ ಮಾಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಈ ಕುರಿತು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಯುವತಿ ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ (24). ಆಕೆ ಎಸ್ಕೆಡಿಆರ್ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ)ಯಾಗಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 29 ರಂದು ಪೂಜಾ ನಾಪತ್ತೆಯಾಗಿದ್ದಳು. ಇದೀಗ ಆಕೆಯ ಮೃತ ದೇಹ ಪತ್ತೆಯಾಗಿದೆ.
ಈ ಪ್ರಕರಣದ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ನಾಲೂರು ಸಮೀಪದ ಮಣಿ ಎಂಬಾತನಗಿದ್ದು, ಆತ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಾಲೂರು ಸಮೀಪದ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
- Advertisement -