- Advertisement -
- Advertisement -
ವಿಟ್ಲ: ಜಾಗದ ವಿಚಾರವಾಗಿ ನಡೆದ ಗಲಾಟೆಯಲ್ಲಿ ಅಣ್ಣನನ್ನು ತಮ್ಮನೇ ಕೊಲೆ ಮಾಡಿರುವ ಘಟನೆ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿಯಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಅವರನ್ನು ಸಹೋದರ ಪದ್ಮನಾಭ (49) ಕೊಲೆಗೈದಿದ್ದಾನೆ.
ಕುಡಿದು ಮನೆಯಲ್ಲಿ ಜಾಗದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಿನ್ನೆ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಇದೇ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -