- Advertisement -
- Advertisement -
ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಮಣ್ಯ ಗ್ರಾಮದ ಕಾಶಿಕಟ್ಟೆ ಮಾರ್ಗವಾಗಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಲಾಡ್ಜ್ ವೊಂದರ ಮುಂಭಾಗ ಯುವಕನೊಬ್ಬನು, ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ತಡೆದು ನಿಲ್ಲಿಸಿ, ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಯುವಕನಿಗೆ ಹಲ್ಲೆ ಮಾಡಿದ ಆರೋಪಿ ಶಂಕರ್ ಎಂಬಾತನ ವಿರುದ್ದ ದಿನಾಂಕ 10.06.2025 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -